Product image 1
HomeStore

ಊರ್ವಶಿ

ಊರ್ವಶಿ

ಶ್ರೀ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ವಿಶಿಷ್ಟ ಲೇಖಕರು. ಸ್ವಾತಂತ್ರ ಯಾವುದೋ ವಿಷಗಳಿಗೆಯಲ್ಲಿ ಪ್ರಕೃತಿಯ ಸಂಚಿಗೆ, ವ್ಯಕ್ತಿಯ ಮೋಹ ಚಾಪಲ್ಯಗಳಿಗೆ ಬಲಿಯಾಗಿ, ತನಗೆ ತಿಳಿಯದಂತೆಯೇ ಪಾತಾಳಕ್ಕೆ ಬಿದ್ದು, ಕ್ಷಣಾರ್ಧದಲ್ಲಿ ಎಚ್ಚರಗೊಂಡು, ಪಶ್ಚಾತ್ತಾಪ ತ್ಯಾಗ ಸೇವೆಗಳಿಂದ ತನ್ನನ್ನು ತಾನು ಉದ್ಧರಿಸಿಕೊಂಡ ಸೀತಾಲಕ್ಷ್ಮಿಯೆಂಬ ಮಹಿಳೆಯ ಹೃದಯ ವಿದ್ರಾವಕವಾದ ಕರುಣಕಥೆಯೇ ಈ ಕಾದಂಬರಿಯ ವಸ್ತು. ಅಹಲ್ಯೋದ್ಧಾರದ ಕಥೆಗಿಂತ ಸೀತಾಲಕ್ಷ್ಮಿಯ ಕಥೆ ಮಹತ್ವದಲ್ಲಿ ಕಡಿಮೆಯಾದುದೇನಲ್ಲ. ಅದಕ್ಕೆ ಪ್ರತಿಯಾಗಿ ಇದು ಒಂದು ಕೈ ಮಿಗಿಲಾದುದೆಂದೇ ನನ್ನ ಎಣಿಕೆ. ದೇವರಾಜನೆಂಬ ಕುತೂಹಲಕ್ಕೆ ಮರುಳಾಗಿ, ಗೌತಮವೇಷದಿಂದ ಬಂದ ಇಂದ್ರನನ್ನು ತನ್ನಲ್ಲಿಗೆ ಬರ ಮಾಡಿಕೊ೦ಡ ಅಹಲ್ಯ, ತಮ್ಮ ಮಾನರಕ್ಷಣೆ ಮಾಡಬೇಕೆಂದು ಅವನನ್ನು ಬೇಡಿಕೊಂಡಳು. ಸೀತಾಲಕ್ಷ್ಮಿ ಗಾದರೋ ಕನಸುಮನಸುಗಳಲ್ಲಿ ಈ ದುರುದ್ದೇಶವಿರಲಿಲ್ಲ. ಇಂದ್ರನಿಗೆ ಗೌತಮನ ಶಿಕ್ಷೆಯನ್ನು ವಿಧಿಸಿದ. ಸೀತಾಲಕ್ಷ್ಮಿಯ ಸತೀತ್ವವನ್ನು ಭಂಗಪಡಿಸಿದ ನರಸಿಂಹನಿಗೆ ಯಾರು ಶಿಕ್ಷೆಯನ್ನು ವಿಧಿಸಿದರು? ಸಮಾಜ ಅವನನ್ನು ಶಿಕ್ಷಿಸುವುದಿರಲಿ, ನರಸಿ೦ಹ ಗಂಡಸು ಅವನು ಏನು ಬೇಕಾದರೂ ಮಾಡಬಹುದು ಎಂದು ತೀರ್ಪಿತ್ತಿತು. ಅಹಲ್ಯ ಯಾರ ಕಣ್ಣಿಗೂ ಬೀಳದೆ ನಿರಾಹಾರಿಯಾಗಿ ಗಾಳಿ ಕುಡಿಯುತ್ತ ಶ್ರೀರಾಮನು ತನ್ನಲ್ಲಿಗೆ ಬರುವವರೆಗೆ ಕಾಲತಳ್ಳಿ, ಅವನಿಂದ ಶುದ್ದಿಯನ್ನೂ ಗಂಡನಿಂದ ಕ್ಷಮೆಯನ್ನು ಪಡೆದಳು. ಈ ತೆರನಾದ ಸಹಾನುಭೂತಿ ಸೀತಾಲಕ್ಷ್ಮಿಗೆ ದೊರಕಲಿಲ್ಲ.

ಸೀತಾಲಕ್ಷ್ಮಿಯ ರೂಪು ಊರ್ವಶಿಯ ಸೌಂದರ್ಯದಂತೆ ಅದ್ಭುತವಾದುದು; ಅದರಿಂದ ಆಕರ್ಷಿತರಾದ ಯುವಕರು ಪತಂಗದಂತೆ ಅದರಲ್ಲಿ ಬೀಳಲೆಳೆಸುವುದು ಆಶ್ಚರ್ಯವೇನಲ್ಲ. ಸೀತಾಲಕ್ಷ್ಮಿಯ ಸೌಂದರ್ಯ ಕಾದಂಬರಿಯನ್ನೆಲ್ಲ ಆವರಿಸಿ ಅದನ್ನು ಕಾಂತಿಗೊಳಿಸಿದೆ. ಆದರೆ ಸೀತಾಲಕ್ಷ್ಮಿಯ ಅಸಹಾಯಕ ಸ್ಥಿತಿಯ ಒಂದು ಸಮಯವನ್ನು ಬಿಟ್ಟರೆ, ಆ ಸೌ೦ದರ್ಯದ ಹಿಂದೆ ದುರ್ದಮ್ಯವಾದ ಸ೦ಯಮ ಅಡಗಿದೆ ಎಂಬುದು ಗಮನಾರ್ಹ. 'ಊರ್ವಶಿ' ಕಾದ೦ಬರಿ ಒಂದು ದೃಷ್ಟಿಯಿಂದ 'ಕನ್ನಡದ ಪುನರುತ್ಥಾನ'.

$0.73

Original: $2.43

-70%
ಊರ್ವಶಿ

$2.43

$0.73

Product Information

Shipping & Returns

Description

ಶ್ರೀ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ವಿಶಿಷ್ಟ ಲೇಖಕರು. ಸ್ವಾತಂತ್ರ ಯಾವುದೋ ವಿಷಗಳಿಗೆಯಲ್ಲಿ ಪ್ರಕೃತಿಯ ಸಂಚಿಗೆ, ವ್ಯಕ್ತಿಯ ಮೋಹ ಚಾಪಲ್ಯಗಳಿಗೆ ಬಲಿಯಾಗಿ, ತನಗೆ ತಿಳಿಯದಂತೆಯೇ ಪಾತಾಳಕ್ಕೆ ಬಿದ್ದು, ಕ್ಷಣಾರ್ಧದಲ್ಲಿ ಎಚ್ಚರಗೊಂಡು, ಪಶ್ಚಾತ್ತಾಪ ತ್ಯಾಗ ಸೇವೆಗಳಿಂದ ತನ್ನನ್ನು ತಾನು ಉದ್ಧರಿಸಿಕೊಂಡ ಸೀತಾಲಕ್ಷ್ಮಿಯೆಂಬ ಮಹಿಳೆಯ ಹೃದಯ ವಿದ್ರಾವಕವಾದ ಕರುಣಕಥೆಯೇ ಈ ಕಾದಂಬರಿಯ ವಸ್ತು. ಅಹಲ್ಯೋದ್ಧಾರದ ಕಥೆಗಿಂತ ಸೀತಾಲಕ್ಷ್ಮಿಯ ಕಥೆ ಮಹತ್ವದಲ್ಲಿ ಕಡಿಮೆಯಾದುದೇನಲ್ಲ. ಅದಕ್ಕೆ ಪ್ರತಿಯಾಗಿ ಇದು ಒಂದು ಕೈ ಮಿಗಿಲಾದುದೆಂದೇ ನನ್ನ ಎಣಿಕೆ. ದೇವರಾಜನೆಂಬ ಕುತೂಹಲಕ್ಕೆ ಮರುಳಾಗಿ, ಗೌತಮವೇಷದಿಂದ ಬಂದ ಇಂದ್ರನನ್ನು ತನ್ನಲ್ಲಿಗೆ ಬರ ಮಾಡಿಕೊ೦ಡ ಅಹಲ್ಯ, ತಮ್ಮ ಮಾನರಕ್ಷಣೆ ಮಾಡಬೇಕೆಂದು ಅವನನ್ನು ಬೇಡಿಕೊಂಡಳು. ಸೀತಾಲಕ್ಷ್ಮಿ ಗಾದರೋ ಕನಸುಮನಸುಗಳಲ್ಲಿ ಈ ದುರುದ್ದೇಶವಿರಲಿಲ್ಲ. ಇಂದ್ರನಿಗೆ ಗೌತಮನ ಶಿಕ್ಷೆಯನ್ನು ವಿಧಿಸಿದ. ಸೀತಾಲಕ್ಷ್ಮಿಯ ಸತೀತ್ವವನ್ನು ಭಂಗಪಡಿಸಿದ ನರಸಿಂಹನಿಗೆ ಯಾರು ಶಿಕ್ಷೆಯನ್ನು ವಿಧಿಸಿದರು? ಸಮಾಜ ಅವನನ್ನು ಶಿಕ್ಷಿಸುವುದಿರಲಿ, ನರಸಿ೦ಹ ಗಂಡಸು ಅವನು ಏನು ಬೇಕಾದರೂ ಮಾಡಬಹುದು ಎಂದು ತೀರ್ಪಿತ್ತಿತು. ಅಹಲ್ಯ ಯಾರ ಕಣ್ಣಿಗೂ ಬೀಳದೆ ನಿರಾಹಾರಿಯಾಗಿ ಗಾಳಿ ಕುಡಿಯುತ್ತ ಶ್ರೀರಾಮನು ತನ್ನಲ್ಲಿಗೆ ಬರುವವರೆಗೆ ಕಾಲತಳ್ಳಿ, ಅವನಿಂದ ಶುದ್ದಿಯನ್ನೂ ಗಂಡನಿಂದ ಕ್ಷಮೆಯನ್ನು ಪಡೆದಳು. ಈ ತೆರನಾದ ಸಹಾನುಭೂತಿ ಸೀತಾಲಕ್ಷ್ಮಿಗೆ ದೊರಕಲಿಲ್ಲ.

ಸೀತಾಲಕ್ಷ್ಮಿಯ ರೂಪು ಊರ್ವಶಿಯ ಸೌಂದರ್ಯದಂತೆ ಅದ್ಭುತವಾದುದು; ಅದರಿಂದ ಆಕರ್ಷಿತರಾದ ಯುವಕರು ಪತಂಗದಂತೆ ಅದರಲ್ಲಿ ಬೀಳಲೆಳೆಸುವುದು ಆಶ್ಚರ್ಯವೇನಲ್ಲ. ಸೀತಾಲಕ್ಷ್ಮಿಯ ಸೌಂದರ್ಯ ಕಾದಂಬರಿಯನ್ನೆಲ್ಲ ಆವರಿಸಿ ಅದನ್ನು ಕಾಂತಿಗೊಳಿಸಿದೆ. ಆದರೆ ಸೀತಾಲಕ್ಷ್ಮಿಯ ಅಸಹಾಯಕ ಸ್ಥಿತಿಯ ಒಂದು ಸಮಯವನ್ನು ಬಿಟ್ಟರೆ, ಆ ಸೌ೦ದರ್ಯದ ಹಿಂದೆ ದುರ್ದಮ್ಯವಾದ ಸ೦ಯಮ ಅಡಗಿದೆ ಎಂಬುದು ಗಮನಾರ್ಹ. 'ಊರ್ವಶಿ' ಕಾದ೦ಬರಿ ಒಂದು ದೃಷ್ಟಿಯಿಂದ 'ಕನ್ನಡದ ಪುನರುತ್ಥಾನ'.

ಊರ್ವಶಿ | Harivu Books